ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶತಮಾನಕ್ಕೂ ಮೀರಿದ ಪರಂಪರೆ, ಭವಿಷ್ಯವನ್ನೇ ಗುರಿಯಾಗಿಟ್ಟ ದೃಢ ಸಂಕಲ್ಪ! ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್- ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ದೂರದೃಷ್ಟಿಯಿಂದ ಹುಟ್ಟಿದ ಕೆ.ಎಸ್.ಡಿ.ಎಲ್ ಇಂದು ಹೊಸ ಯುಗಕ್ಕೆ ಕಾಲಿಡುತ್ತಿದೆ.
ಮೈಸೂರು ಸ್ಯಾಂಡಲ್ ಸೋಪ್ ಗೆ ನವೀನ ರೂಪ, ಉತ್ತರ ಭಾರತವನ್ನೂ ಮತ್ತಷ್ಟು ವ್ಯಾಪಕವಾಗಿ ತಲುಪುವ ಮಹತ್ವಾಕಾಂಕ್ಷೆಯೊಂದಿಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಅವರು ತಿಳಿಸಿದರು.
ಡಿಜಿಟಲ್ ಮಾರುಕಟ್ಟೆ, ರಫ್ತು ವಿಸ್ತರಣೆ-ಎಲ್ಲವನ್ನೂ ಒಟ್ಟುಗೂಡಿಸಿ 2030ರ ಹೊತ್ತಿಗೆ 5,000 ಕೋಟಿ ವಹಿವಾಟಿನ ಗುರಿ. ಕರ್ನಾಟಕದ ಸರ್ಕಾರಿ ಸಂಸ್ಥೆ, ರಾಷ್ಟ್ರಮಟ್ಟದ ಬ್ರ್ಯಾಂಡ್ ಆಗುವ ದಿಟ್ಟ ಹೆಜ್ಜೆ! ಇಟ್ಟಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

