ಬಯಲು ಸೀಮೆಗೆ ಕುಡಿಯುವ ನೀರು ನೀಡುವಂತೆ ಆಂದ್ರ ಸಿಎಂಗೆ ಮನವಿ ಮಾಡಿದ ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಕೋಲಾರದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಬಯಲು ಸೀಮೆ ಪ್ರದೇಶಕ್ಕೆ ಕೃಷ್ಣಾ ನದಿ ನೀರನ್ನು ಹರಿಸುವ ಬಗ್ಗೆ ಆಂಧ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗುವುದು ಎಂದು ಅವಳಿ ಜಿಲ್ಲೆಗಳ ಜನತೆಗೆ ಭರವಸೆ ನೀಡಿದ್ದರು.

  ಕೃಷ್ಣಾ ನದಿ ನೀರಿನ ವಿಷಯ ಎರಡು ರಾಜ್ಯಗಳ ನಡುವಿನ ಸಮಸ್ಯೆಯಾದರೂ ಭರವಸೆ ಕೊಟ್ಟ 2-3 ದಿನಗಳ ಅಂತರದಲ್ಲಿಯೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಬಯಲು ಸೀಮೆ ಜಿಲ್ಲೆಯ ಜನತೆಯು ನೀರಾವರಿ ವಿಚಾರದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ವಿವರಿಸಿ ಸಮಸ್ಯೆಯ ಪರಿಹಾರಕ್ಕಾಗಿ ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ.

- Advertisement - 

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ರೈತರ ವಿಚಾರದಲ್ಲಿ ಕೊಟ್ಟ ಮಾತನ್ನು ಸದಾ ಉಳಿಸಿಕೊಳ್ಳುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬದ್ದತೆಗೆ ಬಡ ಮತ್ತು ರೈತ ವರ್ಗದ ಜನತೆ ಅವರನ್ನು ಆರಾಧಿಸುತ್ತಾರೆ.

ಕುಮಾರಸ್ವಾಮಿ ಅವರ ಈ ಬದ್ದತೆಗೆ ನಾವು ನಿಜವಾಗಲೂ ಅವರ ಅಭಿಮಾನಿಗಳಾಗಿ ಅವರಿಗಾಗಿ ದುಡಿಯುತ್ತಿರುವ ಅವಕಾಶ ನಮಗೆ ಸಿಕ್ಕಿರುವುದು ನಮ್ಮೆಲ್ಲರ ಅದೃಷ್ಟ, ಇಂತಹ ನಿಜವಾದ ಜನನಾಯಕರನ್ನು ಅಧಿಕಾರಕ್ಕೆ ತರಲು ಪಕ್ಷದ ಜವಾಬ್ದಾರಿ ಹೊತ್ತಿರುವ ನಿಖಿಲ್ ಕುಮಾರಸ್ವಾಮಿ ಮತ್ತು ಕೃಷ್ಣಾರೆಡ್ಡಿ  ರಂತಹ ರಾಜ್ಯ ನಾಯಕರು ಕಾರ್ಯಕರ್ತರಿಗೆ ಇನ್ನಷ್ಟು ಬಲ ತುಂಬಿ ಪಕ್ಷ ಸಂಘಟನೆಗೆ ಹೆಚ್ಚು ಹೊತ್ತುಕೊಟ್ಟು ಮುಂದಿನ ಭಾರಿ ರಾಜ್ಯದಲ್ಲಿ ಜೆಡಿಎಸ್  ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರಲು ನಿರಂತರವಾಗಿ ಶ್ರಮಿಸಬೇಕಿದೆ.

- Advertisement - 

 

 

 

Share This Article
error: Content is protected !!
";