ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
1000 ದಿನಗಳ ಸಾರ್ಥಕತೆ… 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರದ ಗ್ಯಾರಂಟಿ!
ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ಸರ್ಕಾರ 1000 ದಿನಗಳನ್ನು ಪೂರೈಸಿರುವುದರ ಪ್ರಯುಕ್ತ ಹಾವೇರಿಯಲ್ಲಿ ಕಂದಾಯ ಇಲಾಖೆ ಮತ್ತು
ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭೂಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ 1 ಲಕ್ಷ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ವಿತರಿಸಿದರು.
ಈ ಸಮಾವೇಶವು ಕೇವಲ ಒಂದು ಕಾರ್ಯಕ್ರಮವಲ್ಲ, ಇದು ಭೂಮಿ ಎಂಬ ಬದುಕಿನ ಆಧಾರವನ್ನು ಜನರ ಕೈಗೆ ಕಾನೂನು ಬದ್ಧವಾಗಿ ಒಪ್ಪಿಸುವ ಮಹತ್ವದ ಹೆಜ್ಜೆಯಾಗಿದೆ. ಹೀಗಾಗಿ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಅವರ ಕನಸುಗಳಿಗೆ ಭದ್ರ ನೆಲೆ ಕಲ್ಪಿಸಲಾಯಿತು ಎಂದು ಡಿಸಿಎಂ ತಿಳಿಸಿದರು.

