ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿಯರಿಗಾಗಿ ಯುಪಿಎಸ್ಸಿ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಹಾಗೂ ತಯಾರಿ ಬಗ್ಗೆ ನುರಿತ ತಜ್ಙರಿಂದ ಒಂದು ದಿನದ ಉಚಿತ ಮಾರ್ಗದರ್ಶನ ಕಾರ್ಯಾಗಾರ ಫೆಬ್ರವರಿ-19ರಂದು ಗುರುವಾರ ಚಿತ್ರದುರ್ಗದಲ್ಲಿ ದಿ ನೇರ್ಲಿಗೆ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಡಾ. ಆಕಾಶ್, ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ.

