ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಎಸ್.ಬಿ.ಐ ಶಾಖೆ ವತಿಯಿಂದ ಸಿ.ಎಸ್.ಆರ್ ನಿಧಿಯಡಿ, ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ 8ನೇ ತರಗತಿಯ 100 ವಿದ್ಯಾರ್ಥಿನಿಯರಿಗೆ ಉಚಿತ ಬೈಸಿಕಲ್ ಕೊಡುಗೆ ನೀಡಲಾಗಿದೆ.
ಉಳಿದ 15 ವಿದ್ಯಾರ್ಥಿನಿಯರಿಗೆ ಪೋಷಕರು ಹಾಗೂ ಶಿಕ್ಷಕರು ಬೈಸಿಕಲ್ ಕೊಡುಗೆ ನೀಡಿದ್ದಾರೆ. ಇದೇ ಫೆ.21 ರಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್.ಡಿ ವಿದ್ಯಾರ್ಥಿನಿಯರಿಗೆ ಬೈಸಿಕಲ್ ಹಸ್ತಾಂತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

