ಪ್ರತಿ ವ್ಯಕ್ತಿಗೂ ಸಮಾನ ಅವಕಾಶ, ಹಕ್ಕು ನೀಡುವುದೇ ಸಾಮಾಜಿಕ ನ್ಯಾಯ-ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ನೆಲದಲ್ಲಿ ಬಸವಾದಿ ಶರಣರಿಂದ ಆರಂಭವಾದ ಸಾಮಾಜಿಕ ನ್ಯಾಯದ ಚಳವಳಿಯನ್ನು ಬಳಿಕ ಸರ್ವಜ್ಞ, ಸೂಫಿ ಸಂತರು, ನಾರಾಯಣ ಗುರು, ಕನಕದಾಸರು ಸೇರಿದಂತೆ ಹಲವಾರು ಸಮಾಜ ಸುಧಾರಕರು ಮುಂದುವರಿಸಿಕೊಂಡು ಬಂದಿದ್ದಾರೆ. ಬಾಬಾ ಸಾಹೇಬರು ಈ ಆಶಯಗಳಿಗೆ ಸಾಂವಿಧಾನಿಕ ರಕ್ಷಣೆ ನೀಡಿ, ಕಾನೂನಿನ ಬಲ ತುಂಬಿದ್ದಾರೆ. ಆದರೂ ಇಂದಿಗೂ ಅಸಮಾನತೆ, ಶೋಷಣೆಗಳು ಜೀವಂತವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ, ಧರ್ಮ, ಲಿಂಗ, ಭಾಷೆ, ಬಣ್ಣ ಈ ಯಾವುದರ ಮೇಲೂ ತಾರತಮ್ಯ ಮಾಡದೆ, ಪ್ರತಿ ವ್ಯಕ್ತಿಗೂ ಸಮಾನ ಅವಕಾಶ, ಹಕ್ಕುಗಳನ್ನು ನೀಡುವುದೇ ಸಾಮಾಜಿಕ ನ್ಯಾಯ. ಇದಕ್ಕಾಗಿಯೇ ನನ್ನ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಮುಡಿಪಿಟ್ಟಿದ್ದೇನೆ, ನನ್ನ ಕೊನೆಯ ಉಸಿರಿರುವವರೆಗೂ ಅವಕಾಶ ವಂಚಿತ ಜನರ ಪರವಾಗಿಯೇ ನಿಲ್ಲುತ್ತೇನೆ.

- Advertisement - 

ವಿಶ್ವ ಸಾಮಾಜಿಕ ನ್ಯಾಯದ ದಿನವಾದ ಇಂದು ಸಾಮಾಜಿಕ ನ್ಯಾಯದ ಬಂಡಿಯನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯುವ ಸಂಕಲ್ಪಗೈಯ್ಯೋಣ. ಸಮಸಮಾಜಕ್ಕಾಗಿ ಜೊತೆಗೂಡಿ ಶ್ರಮಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

 

- Advertisement - 

Share This Article
error: Content is protected !!
";