ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಕಚೇರಿಯಲ್ಲಿಂದು ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯಪಾಲರಾದ ಥಾವರ್ಚಂದ್ಗೆಹ್ಲೋಟ್ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ಅವರೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು.
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಲವು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿ ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವುದೇ ನಮ್ಮ ಸಂಕಲ್ಪವಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

