ಇಂದು ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ನಾಳೆ ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಅಗತ್ಯ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಲಿದೆ.

- Advertisement - 

ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಲಿದೆ.

ಇದೇ ವೇಳೆ, ನಾಳೆ ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. 

- Advertisement - 

ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article
error: Content is protected !!
";