ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು ಸದ್ಯದ ಸ್ಥಿತಿಯೇ ಮುಂದುವರೆದರೆ ಮುಂದೆ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.
ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ. ಹೈಕಮಾಂಡ್ ಒಂದು ದಿನದಲ್ಲಿಯೇ ಈ ಸಮಸ್ಯೆ ಬಗೆಹರಿಸುವ ಶಕ್ತಿ ಹೊಂದಿದೆ ಎಂದು ಬಾಲಕೃಷ್ಣ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ.
ತೀರ್ಮಾನ ಆಗದ ಅಧಿಕಾರ ಹಂಚಿಕೆ, ಕಾರ್ಯಕರ್ತರು, ಶಾಸಕರು ಅಧಿಕಾರಿಗಳಲ್ಲಿ ಗೊಂದಲ ಸೃಷ್ಠಿ

