ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ಪ್ರಯುಕ್ತ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ ವಿಶೇಷ ರಿಯಾಯಿತಿ ಮಾರಾಟ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಲಭ್ಯವಿರುವ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಇದೇ ಮಾರ್ಚ್ 06 ರಿಂದ 25 ರವರೆಗೆ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಇದರ ಸದಾವಕಾಶ ಉಪಯೋಗಿಸಿಕೊಳ್ಳಬೇಕು ಎಂದು ಲಿಡ್ಕರ್ ಜಿಲ್ಲಾ ಸಂಯೋಜಕ ವೆಂಕಟೇಶ್ ತಿಳಿಸಿದ್ದಾರೆ.

