ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗ ಅವಲಂಬಿಸಿ ಹೊರರಾಜ್ಯಗಳಿಂದ ಸಾವಿರಾರು ಕಾರ್ಮಿಕರು ವಲಸೆ ಬರುತ್ತಿರುವುದರಿಂದ ಜನಸಂಖ್ಯೆ ತುಂಬಾ ಹೆಚ್ಚಾಗಿದೆ.
ವಾಹನಗಳ ಸಂಖ್ಯೆ ಸಹ ದಿನೇ ದಿನೇ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ದೊಡ್ಡಬಳ್ಳಾಪುರಕ್ಕೆ ಸಂಚಾರ ಪೊಲೀಸ್ ಠಾಣೆ ಮಂಜೂರು ಮಾಡಿರುವುದು ಸ್ವಾಗತಾರ್ಹ.
ಮುಖ್ಯಮಂತ್ರಿಗಳ ದಾಖಲೆ ಬಜೆಟ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಣಕಾಸು ಹೊಂದಿಸಲು ತೆರಿಗೆಯ ಪರಿಷ್ಕರಣೆ ಯಿಂದ ಆದಾಯ ದೃಢೀಕರಣಕ್ಕೆ ಹೆಚ್ಚು ಒತ್ತು ಕೊಟ್ಟಿರುವುದು ಸ್ವಾಗತಾರ್ಹ ಎಂದು
ಲಾವಣ್ಯ ಪದವಿ ಪೂರ್ವ ಕಾಲೇಜ್ ಪ್ರಾಮ್ಶುಪಾಲರು ಹಾಗು ಅರ್ಥಶಾಸ್ತ್ರ ಪ್ರಾಧ್ಯಾಪಕ ಎಂ. ಸಿ. ಮಂಜುನಾಥ್ ಹೇಳಿದ್ದಾರೆ.

