ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ. ಒಂದು ಕಡೆ ಬಾಕಿಯಿರುವ ₹37,000 ಸಾವಿರ ಕೋಟಿಗೂ ಅಧಿಕ ಹಣ ಪಾವತಿಸದೆ ಗುತ್ತಿಗೆದಾರರುಗಳನ್ನು ನೇಣಿನ ಕುಣಿಕೆಗೆ ತಳ್ಳುತ್ತಿದ್ದರೆ,
ಇನ್ನೊಂದು ಕಡೆ ಯಾವುದೇ ಹೊಸ ಕಟ್ಟಡಗಳಿಗೆ ವಿದ್ಯುತ್ಸಂಪರ್ಕ ನೀಡಬಾರದು ಎನ್ನುವ ಕಾಂಗ್ರೆಸ್ ಸರ್ಕಾರದ ಸುತ್ತೋಲೆ ವಿದ್ಯುತ್ಗುತ್ತಿಗೆದಾರರ ಜೀವನವನ್ನು ಅತಂತ್ರವಾಗಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಜನರು ವಿದ್ಯುತ್ಇಲ್ಲದೆ ಪರಿತಪಿಸುತ್ತಿದ್ದರೆ, ಗುತ್ತಿಗೆದಾರರು ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮಿತಿ ಮೀರಿದ್ದು, ಈಗ ವಿದ್ಯುತ್ ಗುತ್ತಿಗೆದರೂ ಸಹ ಬೀದಿಗಿಳಿದು ಹೋರಾಟ ಮಾಡಬೇಕಿರುವ ಪರಿಸ್ಥಿತಿ ಬಂದಿರುವುದು ರಾಜ್ಯದ ದುರಂತ.
ಕಲೆಕ್ಷನ್-ಕಮಿಷನ್-ಕರಪ್ಷನ್ನಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಪಾಲಿಗೆ ಅಕ್ಷರಶಃ ಶಾಪವಾಗಿದೆ ಎಂದು ಅಶೋಕ್ ಟೀಕಿಸಿದರು.

