ತೋಟಗಾರಿಕೆ ತರಬೇತಿ : ಚಿತ್ರದುರ್ಗ ಜಿಲ್ಲೆಯ ರೈತ ಮಕ್ಕಳಿಂದ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

     ತರಬೇತಿಗಾಗಿ ಒಟ್ಟು 15 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

- Advertisement - 

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರು ಚಿತ್ರದುರ್ಗ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್   https://horticulturedir.karnataka.gov.in ನಲ್ಲಿ 2026ರ ಮಾರ್ಚ್ 12 ರಿಂದ ಏಪ್ರಿಲ್ 13 ರವರೆಗೆ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 7022208303 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

- Advertisement - 

Share This Article
error: Content is protected !!
";