ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆಯ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಧುನಿಕ ಸೌಲಭ್ಯಗಳನ್ನೊಳಗೊಂಡ ಮುಕ್ತ ರಂಗಮಂದಿರದ ಕಾಮಗಾರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ರಂಗಮಂದಿರವು ನಿರ್ಮಾಣವಾದ ನಂತರ ಪೊಲೀಸ್ ಸಿಬ್ಬಂದಿಗಳ ಸಭೆಗಳು, ತರಬೇತಿ ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ವೇದಿಕೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

