ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀ ಸಮರ್ಥ್ ಶಾಮನೂರು ಅವರು ಮಾರ್ಚ್ 23ರ ಸೋಮವಾರದಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಹಿರಿಯ ನಾಯಕರಾದ ಡಾ. ಶಾಮನೂರು ಶಿವಶಂಕರಪ್ಪನವರ ಆಶೀರ್ವಾದದೊಂದಿಗೆ ನಡೆಯಲಿರುವ ಈ ಪ್ರಮುಖ ರಾಜಕೀಯ ವಿದ್ಯಮಾನಕ್ಕೆ ರಾಜ್ಯದ ಘಟಾನುಘಟಿ ನಾಯಕರು ಸಾಕ್ಷಿಯಾಗಲಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.
ಗಣ್ಯರ ಉಪಸ್ಥಿತಿ-
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಈ ಕೆಳಗಿನ ಪ್ರಮುಖರು ಭಾಗವಹಿಸಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಮೆರವಣಿಗೆಯ ಮಾರ್ಗ ಸೂಚಿ-
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿದೆ.
ಮಾರ್ಚ್-23 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಮಾಲಾರ್ಪಣೆ: ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಗೌರವ ಸಮರ್ಪಣೆ.ಧಾರ್ಮಿಕ ಸೌಹಾರ್ದತೆ: ಹಜರತ್ ಖಡಕ್ ಷಾವಲಿ ದರ್ಗಾಕ್ಕೆ ಭೇಟಿ ಮತ್ತು ಪ್ರಾರ್ಥನೆ.
ಸಂಚರಿಸುವ ಮಾರ್ಗ: ಹಳೇಪೇಟೆ, ಹಗೇದಿಬ್ಬ ಸರ್ಕಲ್, ಗಾಂಧಿನಗರ, ಅಜಾದ್ ನಗರ, ಅಹಮ್ಮದ್ ನಗರ ರಸ್ತೆ, ಚಾರ್ಲಿ ಪೈಲ್ವಾನ್ ಸರ್ಕಲ್, ಹಾಸಬಾವಿ ಸರ್ಕಲ್, ಚಾಮರಾಜಪೇಟೆ ಮುಖ್ಯರಸ್ತೆ, ಮಂಡಿಪೇಟೆ ಮತ್ತು ರೈಲ್ವೇ ಅಂಡರ್ ಬ್ರಿಡ್ಜ್ ಮೂಲಕ ಪಿ.ಬಿ. ರಸ್ತೆ ತಲುಪಲಿದೆ.
ಸಮಾಪ್ತಿ: ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆ ಕಚೇರಿಗೆ ತಲುಪಿ ನಾಮಪತ್ರ ಸಲ್ಲಿಕೆಯೊಂದಿಗೆ ಮೆರವಣಿಗೆ ಮುಕ್ತಾಯಗೊಳ್ಳಲಿದೆ.
ಮನವಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ವಿನಂತಿಸಿದೆ.

