ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ. ಸುಧಾಕರ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ, ಗುರುವಾರ ನಗರದ ವೇದಾವತಿ ನಗರದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು.
ಸಚಿವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದು, ಅವರು ಎಂದಿನಂತೆ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂಬ ಆಶಯದೊಂದಿಗೆ ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರ ಹಿತೈಷಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಸ್ಕಲ್ ವೈ. ನಾಗರಾಜ್: ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು.
ವಿ. ಅರುಣ್ ಕುಮಾರ್: ಬಬ್ಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು.ಹೊಸಹಟ್ಟಿ ಚಿತ್ತಪ್ಪ: ಮುಖಂಡರು. ಪಿ. ಕೃಷ್ಣಮೂರ್ತಿ: ಟಿ.ಬಿ. ಸರ್ಕಲ್.
ತಿಪ್ಪ ನಾಯಕ (ಆದಿರಾಳು): ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸದಸ್ಯರು. ಬಬ್ಬೂರು ಗಿರೀಶ್: ಆಟೋ ಸಂಘದ ಮುಖಂಡರು. ಲಕ್ಷ್ಮಣ್: ದಲಿತ ಸಮುದಾಯದ ಮುಖಂಡರು.
ಇದರೊಂದಿಗೆ ವಂದೇ ಮಾತರಂ ಜಾಗೃತಿ ವೇದಿಕೆಯ ಸದಸ್ಯರು, ಪದಾಧಿಕಾರಿಗಳು ಹಾಗೂ ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಚಿವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.

