ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೊಡಿಹಳ್ಳಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೆಯ ಜಯಂತಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲ ಯುವಕರ ಸಮ್ಮುಖದಲ್ಲಿ ಮುಖಂಡ ಸಣ್ಣ ನಾಗಯ್ಯ,ದೊಡ್ಡ ಓಬಯ್ಯ ಗ್ರಾಮ ಪಂಚಾಯಿತಿ ಸದಸ್ಯ ರೇವಣ್ಣ ಇತರೆ ಸಮುದಾಯದ ಮುಖಂಡರು ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ,ಪುಷ್ಪಾರ್ಚನೆ ಮಾಡಿ ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ನಾಯಕನ ಸಾಧನೆಗಳ ಮತ್ತು ಅವರ ಜೀವನದ ಆದರ್ಶ ಮೌಲ್ಯಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಶಿಕ್ಷಣ ಪಡೆಯುವ ಮೂಲಕ ಯುವಕರು ಮಾದರಿ ಸಮಾಜ ನಿರ್ಮಿಸಬೇಕು ಎಂದು ಜನರಿಗೆ ತಿಳಿಸಲಾಯಿತು.
ಸಂಘದ ಅಧ್ಯಕ್ಷ ಟಿ .ಶಿವಮೂರ್ತಿ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಯುವ ಜನತೆಯಲ್ಲಿ, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಎಂ. ಎಚ್ ತಿಪ್ಪೇಸ್ವಾಮಿ, ಕೆ.ಇ.ಬಿ ಮಲ್ಲಯ್ಯ, ,ಹನುಮಂತಪ್ಪ, ಪುಟ್ಟಣ್ಣ, ತಿಪ್ಪೇಸ್ವಾಮಿ, ಓಬಣ್ಣ, ದುರುಗಣ್ಣ, ನಿಂಗಣ್ಣ, ಲಿಂಗರಾಜು.ಡಿ, ಮಲ್ಲಿಕಾರ್ಜುನಯ್ಯ.ಟಿ, ಕುಮಾರ ಸ್ವಾಮಿ .ಟಿ, ವಿನಯ್ ಕುಮಾರ್.ಬಿ.ಎಂ, ಮಂಜುನಾಥ್. ಎಂ.ಟಿ, ರುದ್ರಮುನಿ.ಏಚ್, ಶ್ರೀಧರ್.ಏಚ್ ,ನಿಂಗರಾಜು.ಟಿ, ವಿಜಯ್ ಕುಮಾರ್.ಡಿ, ತಿಪ್ಪೇಸ್ವಾಮಿ.ಯು, ರಮೇಶ್.ಎಂ, ಗುರುಮೂರ್ತಿ, ತಿಪ್ಪೇಸ್ವಾಮಿ, ಪಿ.ಎಂ ಚಿದಾನಂದ್, ಮೋಹನ್ .ಡಿ ನಂದೀಶ್. ಓ, ರಾಜು.ಡಿ, ಮಹೇಶ್, ಮನೋಜ್ ಕುಮಾರ್.ಎಂ, ಉಪೇಂದ್ರ,
ರವೀಶ್, ಮಲ್ಲಿಕಾರ್ಜುನ್.ಜಿ, ಅರುಣ್ ಕುಮಾರ್.ಟಿ, ದಯಾನಂದ.ಟಿ, ತಿಪ್ಪೇಶ್ ,ಮನೋಜ್ ಕುಮಾರ್.ಟಿ, ಜಯಂತ್, ನಾಗೇಶ್, ಮಂಜು, ಕಿರಣ್, ಸ್ವಾಮಿ.ಆರ್, ಕೋಟೆಶ್, ಗೋಪಿನಾಥ್, ಮೈಲಾರಿ, ದುರುಗೇಶ್, ಅಭಿಷೇಕ್, ವಿಜಯ್.ಎಸ್, ಮಾರಣ್ಣ, ಶಿವಪ್ಪ, ಪರಶುರಾಮ್, ಕಣುಮೇಶ್ , ಮಹೇಶ್, ಕೊಲ್ಲಾರಿ, ಜೀವನ್,ಗಣೇಶ್, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು,ಮತ್ತು ಸಮುದಾಯದ ಎಲ್ಲ ಮುಖಂಡರು, ಯಜಮಾನರು ಸಮಸ್ತ ಯುವಕ ಯುವತಿಯರು, ಸರ್ವ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

