ಉಪವಲಯ ಅರಣ್ಯಾಧಿಕಾರಿ ಅಮಾನತು

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಬೀಟೆ ಮರದ ದಿಮ್ಮಿಗಳ ಕಳ್ಳ ಸಾಗಾಣಿಕೆ ಆರೋಪದಡಿಯಲ್ಲಿ ಉಪವಲಯ ಅರಣ್ಯಾಧಿಕಾರಿ ಆರ್. ಯುವರಾಜ್‌ರನ್ನು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
 

- Advertisement - 

ಹೊಸನಗರ ತಾಲೂಕಿನ ಎಂ.ಗುಡೇಕೊಪ್ಪ ಗ್ರಾಮ ಅರಣ್ಯ ಸಂರಕ್ಷಣಾಧಿಕಾರಿ ಅರಳಿಕೊಪ್ಪ ಗ್ರಾಮದ ಸರ್ವೆ ನಂಬರ್ 57ರಲ್ಲಿ ಬಿದ್ದಿದ್ದ ಬೀಟೆ ಮರವನ್ನು ಸರ್ಕಾರಿ ನಾಟ ಸಂಗ್ರಹಾಲಯಕ್ಕೆ ಸಾಗಿಸದೆ ಅಕ್ರಮವಾಗಿ ಬೇರೆ ಕಡೆಗೆ ಸಾಗಿಸಿದ ಆರೋಪ ಕೇಳಿಬಂದಿತ್ತು. 

- Advertisement - 

ಈ ಸಂಬಂಧ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯ ಸಚಿವರ ಮೌಖಿಕ ನಿರ್ದೇಶನದ ಮೇರೆಗೆ ವಿಚಾರಣೆ ನಡೆಸಿದ್ದರು. ಈ ಕುರಿತು ಸಾಗರದ ಉಪ ಸಂರಕ್ಷಣಾಧಿಕಾರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವರದಿ ನೀಡಿತ್ತು. 

ಸ್ಥಳ ಪರಿಶೀಲನೆ ನಡೆಸಿದ್ದ ವಿಚಾರಣಾ ತಂಡದ ಎದುರು ಆರೋಪಿತ ಉಪ ವಲಯ ಅರಣ್ಯಾಧಿಕಾರಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.

- Advertisement - 

 

Share This Article
error: Content is protected !!
";