ಅ.21 ರಿಂದ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ ೨೧ ರಿಂದ ನಿಗಧಿಪಡಿಸಿದ ದಿನಾಂಕದಂದು ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

- Advertisement - 

     ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.

- Advertisement - 

ಅಕ್ಟೋಬರ್ ೨೧ರಂದು ಜಿಲ್ಲೆಯ ತುಮಕೂರು ತಾಲ್ಲೂಕು ಬೆಳ್ಳಾವಿ, ತಿಪಟೂರು ತಾಲ್ಲೂಕು ಈಚನೂರು ಹಾಗೂ ಕೊರಟಗೆರೆ ತಾಲ್ಲೂಕು ತೋವಿನಕೆರೆ  ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";