![](https://www.chandravallinews.com/wp-content/uploads/2023/01/Cong.jpg)
i
ಜ.14ರಂದು ಕಾಂಗ್ರೆಸ್ ಪಕ್ಷದ ಸಂಘಟನಾ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಜನವರಿ 8ರಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶದ ಯಶಸ್ವಿ ಸಂವಿಧಾನ, ಮೀಸಲಾತಿ ರಕ್ಷಣೆಗೆ ಬಹುದೊಡ್ಡ ಶಕ್ತಿ ನೀಡಿದೆ. ಈ ಹಿನ್ನೆಯಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲು ಹಾಗೂ ಸಮಾವೇಶದ ಯಶಸ್ವಿಗೆ ಶ್ರಮಿಸಿದ ಕಾರ್ಯಕರ್ತರು, ಮುಖಂಡರುಗಳಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮವನ್ನು ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜನವರಿ 14, ಶನಿವಾರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಸಹ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ಕೇಶವಮೂರ್ತಿ ತಿಳಿಸಿದ್ದಾರೆ.
ಸಮಾವೇಶಕ್ಕೆ ಪಕ್ಷದ ನಿರೀಕ್ಷೆಗೂ ಮೀರಿ ರಾಜ್ಯದ ವಿವಿಧ ಮೂಲೆಗಳಿಂದ ಎಸ್ಸಿ, ಎಸ್ಟಿ ವರ್ಗದ ಜನ ಲಕ್ಷಾಂತರ ಸಂಖ್ಯೆಯಲ್ಲಿ ಹರಿದುಬಂದು ನಾಡು ಮತ್ತು ಸಂವಿಧಾನ ರಕ್ಷಣೆಗೆ ನಾವು ಬದ್ಧ ಎಂಬ ಸಂದೇಶವನ್ನು ಜನವಿರೋಧಿ ಬಿಜೆಪಿ ಆಡಳಿತಕ್ಕೆ ರವಾನಿಸಿರುವುದು ಹೊಸ ಬದಲಾವಣೆಗೆ ಮುನ್ಸೂಚನೆ ದೊರೆತಿದೆ. ಐತಿಹಾಸಿಕ ಚಿತ್ರದುರ್ಗದಲ್ಲಿ ಹೊಸ ದಾಖಲೆ ಬರೆದಿದೆ.
ಇದರಿಂದ ಸಮಾವೇಶ ಸಂಘಟಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರಲ್ಲಿ ಹೋರಾಟದ ಕಿಚ್ಚು ಹೆಚ್ಚಿದೆ. ಜೀವ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೋಗಿಯಬೇಕೆಂಬ ಕಾಂಗ್ರೆಸ್ ಪಕ್ಷದ ಆಶಯಕ್ಕೆ ಸಮಾವೇಶದ ಯಶಸ್ವಿ ಆನೆಬಲ ನೀಡಿದಂತಾಗಿದೆ.
ಈ ಹಿನ್ನೆಲೆಯಲ್ಲಿ ಎಸ್ಸಿ, ಎಸ್ಟಿ ವರ್ಗದ ಜನರ ಒಗ್ಗಟ್ಟು ಕಾಯ್ದುಕೊಳ್ಳಲು ಹಾಗೂ ನೊಂದ ಜನರ ಹಕ್ಕುಗಳನ್ನು ಕಿತ್ತುಕೊಳ್ಳುವ, ಸಂವಿಧಾನ ಬದಲಾವಣೆಗೆ ಕೈ ಹಾಕಿರುವ ಬಿಜೆಪಿ ವಿರುದ್ಧ ಪಕ್ಷದ ನೇತೃತ್ವದಲ್ಲಿ ನಿರಂತರ ಹೋರಾಟ ಹಮ್ಮಿಕೊಳ್ಳುವ ಕುರಿತು ಚರ್ಚಿಸಲು ಹಾಗೂ ಸಮಾವೇಶದ ಯಶಸ್ವಿಗೆ ಹಗಲು-ರಾತ್ರಿ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಹಾಲಿ-ಮಾಜಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಸಮಾವೇಶಕ್ಕೆ ಶ್ರಮಿಸಿದ ಎಲ್ಲರಿಗೂ ಅಂದು ವಿಶೇಷವಾಗಿ ಕೃತಜ್ಞತೆ ಸಮರ್ಪಣೆ ಹಮ್ಮಿಕೊಳ್ಳಲಾಗಿದೆ.
ಸಭೆಗೆ ಸಮಾವೇಶ ಸಂಘಟನಾ ಸಮಿತಿ ಅಧ್ಯಕ್ಷರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ನಾಯಕರಾದ ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಪಿ.ಟಿ.ಪರಮೇಶ್ವರನಾಯ್ಕ್, ಶಿವರಾಜ್ ತಂಗಡಗಿ, ಬಿ.ಎನ್.ಚಂದ್ರಪ್ಪ, ಟಿ.ರಘುಮೂರ್ತಿ, ತುಕರಾಂ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಈ ಸಭೆಗೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಸೇರಿದಂತೆ ಇತರೆ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೇಶವಮೂರ್ತಿ ಮನವಿ ಮಾಡಿಕೊಂಡಿದ್ದಾರೆ.