i
ಹಿರಿಯೂರಿನಲ್ಲಿ ಜನವರಿ-14 ರಂದು ಜೆಡಿಎಸ್ ಸಭೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
2023ರ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠರು ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಹಮ್ಮಿಕೊಂಡಿದ್ದು ಅದರಂತೆ ಹಿರಿಯೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಪಂಚರತ್ನ ರಥ ಯಾತ್ರೆ ಫೆ.2 ರಂದು ಆಯೋಜಿಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಪೂರ್ವಭಾವಿಯಾಗಿ ಚರ್ಚಿಸಲು ಜನವರಿ-14 ರಂದು ಬೆಳಿಗ್ಗೆ 11 ಗಂಟೆಗೆ ತನ್ಯಾಸಿ ಗೌಂಡರ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕಾರ್ಯಕರ್ತರ, ಮುಖಂಡರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಮಸ್ಕಲ್ ಹನುಮಂತರಾಯಪ್ಪ ತಿಳಿಸಿದ್ದಾರೆ.