ಅಮಿತ್ ಶಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ದೂರು ದಾಖಲು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಸಂಸದ – ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ – ಅಂಬೇಡ್ಕರ್ ಎನ್ನುವುದು ಈಗ ಫ್ಯಾಷನ್ ಆಗಿದೆ. ಅದರ ಬದಲು ಅಷ್ಟೇ ಬಾರಿ ದೇವರ ಹೆಸರು ಹೇಳಿದ್ದರೆ ಅವರೆಲ್ಲರೂ ಸ್ವರ್ಗಕ್ಕಾದರೂ ಹೋಗುತ್ತಿದ್ದರು ಎಂದು ಬಾಬಾ ಸಾಹೇಬರನ್ನು ಟೀಕಿಸಿ ತಮ್ಮೊಳಗಿರುವ ಮನುವಾದಿ ಮನಸ್ಥಿತಿಯನ್ನು ಹೊರಹಾಕಿದ್ದರು ಎಂದು ಕಾಂಗ್ರೆಸ್ ಕಿಡಿಕಾರಿದೆ.

- Advertisement - 

ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಎಂಬಂತೆ, ಶೋಷಿತರ ಶಾಶ್ವತ ಧ್ವನಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ್ದಕ್ಕೆ ಸಂವಿಧಾನ ವಿರೋಧಿ ಗೃಹ ಸಚಿವರು ಶಿಕ್ಷೆ ಅನುಭವಿಸಲೇ ಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.

- Advertisement - 
Share This Article
error: Content is protected !!
";