ಕೆಪಿಎಸ್‌ಸಿ ವಿರುದ್ಧದ ಹೋರಾಟ ಬೆಂಬಲಿಸಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪದೇ ಪದೆ ದೋಷಗಳು ನಡೆಯುತ್ತಲೇ ಇದೆ. ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಪ್ರಶ್ನೆ ಪತ್ರಿಕೆಯಲ್ಲಿ ಸುಮಾರು 50 ಪರ್ಸೆಂಟ್‌ತಪ್ಪುಗಳು ಕಂಡು ಬರುತ್ತಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ಹೀಗಾಗಿ ವಿದ್ಯಾರ್ಥಿಗಳು ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ.

- Advertisement - 

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಬೆಂಬಲ ನೀಡಿ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇದೇ ವೇಳೆ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

 

- Advertisement - 

Share This Article
error: Content is protected !!
";