ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಯಂ ಘೋಷಿತ ಆರ್ಥಿಕ ತಜ್ಞ “ಸಾಲರಾಮಯ್ಯ” ಅವರೇ ಸಾಲ ಮಾಡುವುದೇ ಸಾಧನೆಯೇ ? ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ರಾಜ್ಯವನ್ನು ಆರ್ಥಿಕ ತುರ್ತು ಪರಿಸ್ಥಿತಿಗೆ ತಳ್ಳಿರುವ ಕಾಂಗ್ರೆಸ್ಸರ್ಕಾರ, ಅದಕ್ಷ ಹಾಗೂ ಅಸಮರ್ಪಕ ಆಡಳಿತದಿಂದ ಕರ್ನಾಟಕವನ್ನು ದೊಡ್ಡ ಪ್ರಮಾಣದ ಸಾಲದ ಕೂಪಕ್ಕೆ ಸಿಲುಕಿಸಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ರಾಜ್ಯದ ಆದಾಯ ಹೆಚ್ಚಿಸುವಲ್ಲಿ ಸಂಪೂರ್ಣಎಡವಿರುವ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸವನ್ನು ಬರಿದು ಮಾಡಿದ್ದಾರೆ.
ವರ್ಷದಿಂದ ವರ್ಷಕ್ಕೆ ಸಾಲದ ಪ್ರಮಾಣ ಏರಿಕೆಯಾಗುತ್ತಿದ್ದು, ಅಸಲು ಪಾವತಿಗಿಂತ ಬಡ್ಡಿ ಪಾವತಿಯೇ ಜಾಸ್ತಿಯಾಗಿರುವುದು ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಜೆಡಿಎಸ್ ಟೀಕಿಸಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೀಗೆ ಮುಂದುವರಿದರೆ, ಅಧಿಕಾರದಿಂದ ಕೆಳಗಿಳಿಯುವಷ್ಟರಲ್ಲಿ ರಾಜ್ಯವನ್ನು ದಿವಾಳಿ ಮಾಡಿಯೇ ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

