ಮಾರ್ಚ್-13 ರಿಂದ 15 ವರೆಗೆ ಉಪಲೋಕಾಯುಕ್ತರಿಂದ ದೂರು ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಮಾ.13 ರಿಂದ 15 ರವರೆಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೊಸಪೇಟೆ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಹೊಸಪೇಟೆಯ ಡ್ಯಾಂ ರಸ್ತೆಯ ನೆಹರು ಕಾಲೋನಿಯಲ್ಲಿರುವ ಸಹಕಾರಿ ಕಲ್ಯಾಣ ಮಂಟಪದಲ್ಲಿ ಮಾ.13 ಮತ್ತು ಮಾ.15 ರಂದು ಬೆ.10ಯಿಂದ ಸಂಜೆ.5 ಗಂಟೆವರೆಗೆ ಸಾರ್ವಜನಿಕರಿಂದ ದೂರು ಸ್ವೀಕಾರ ಮತ್ತು ದೂರು ವಿಚಾರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ಸರ್ಕಾರಿ ನೌಕರರಿಂದ ಸಕಾರಣವಿಲ್ಲದೇ ತೊಂದರೆ ಉಂಟಾಗಿದ್ದರೆ ಅಥವಾ ಸರ್ಕಾರಿ ನೌಕರರು ದುರಾಡಳಿತದಲ್ಲಿ ತೊಡಗಿದ್ದರೆ, ಅಂತಹ ದೂರುಗಳನ್ನು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಲೋಕಾಯುಕ್ತರ ಮುಂದೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share This Article
error: Content is protected !!
";