ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯದಾದ ಮರಣ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆ ಸಿಬ್ಬಂದಿ ಕೇಳುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ತುರ್ತಾಗಿ ಖುದ್ದಾಗಿ ಸರಳೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಅರ್ಜಿದಾರರಿಂದ ಛಾಪಾ ಕಾಗದದ ಮೇಲೆ ವಂಶ ವೃಕ್ಷದ ಮಾಹಿತಿ ಪಡೆದು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ದಾಖಲೆ ಪರಿಶೀಲಿಸಿ ಉಪ ತಹಸೀಲ್ದಾರರ ಮೂಲಕ ದೃಢೀಕರಿಸಿ, ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

