ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾನ್ ಸುಳ್ಳುಗಾರ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ದಿವಾಳಿಯಾಗಿದ್ದು, ನಮಗೆ ಬೇರೆ ಯಾವುದೇ ಖಾತೆ ನೀಡಿ ಎಂದು ದುಂಬಾಲು ಬಿದ್ದಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ತಿಳಿಸಿದೆ.
ಅಲ್ಲಿಗೆ ಸಾರಿಗೆ ಇಲಾಖೆ ಹಿಂದೆಂದೂ ಕಂಡು ಕೇಳರಿಯದಷ್ಟು ಲಾಭದಲ್ಲಿದೆ ಎಂದು ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ತಿಳಿಸಿದೆ.