ರಾಜಲಕ್ಷ್ಮಿ ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ.ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು.

- Advertisement - 

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಅವರು ಅನಾರೋಗ್ಯದಿಂದ ಬರಲಾಗದ ಕಾರಣ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

- Advertisement - 

ಕರಾವಳಿ ಭಾಗದ ದೈವರಾಧನೆ ಕುರಿತು ರಾಜಲಕ್ಷ್ಮಿ ಅವರು ಸುಧಾ ವಾರಪತ್ರಿಕೆಗೆ ಬರೆದಿದ್ದ ಲೇಖನ ಮುಖಪುಟದಲ್ಲಿ (cover page story) ಪ್ರದಾನವಾಗಿ ಪ್ರಕಟಗೊಂಡಿದ್ದು ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಆಯ್ಕೆಯಾಗಿತ್ತು.

 

- Advertisement - 

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಸ್ಕರ ರೈ ಕಟ್ಟ, ರಾಜಲಕ್ಷ್ಮಿ ಪತಿ ಗಣಪತಿ ಭಟ್ , ಪ್ರವೀಣ್ ಕುಮಾರ್ ಕೋಡಿಯಾಲಬೈಲು ಹಾಜರಿದ್ದರು.

 

 

Share This Article
error: Content is protected !!
";