ಒಳ ಮೀಸಲಾತಿ ಸಮೀಕ್ಷೆಯ ಸಮಸ್ಯೆ ನಿವಾರಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿಗಣತಿ ಜಟಾಪಟಿಯ ಮಧ್ಯೆ ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆಗೆ ಮುಂದಾಗಿದೆ. ಶಿಕ್ಷಕರು
, ಅಂಗನವಾಡಿ ಕಾರ್ಯಕರ್ತೆಯರಿಂದ ಗಣತಿ ನಡೆಯಲಿದೆ. ಸಿಬ್ಬಂದಿಗೆ ಬರೀ 3 ತಾಸು ತರಬೇತಿ ನೀಡಿ ಗಣತಿ ಕಾರ್ಯ ನಡೆದಿದ್ದು, ಎಡವಟ್ಟುಗಳ ಬಗ್ಗೆ ಎಡಗೈ-ಬಲಗೈ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ‌ ಎಂದು ಸರ್ಕಾರದ ವಿರುದ್ಧ ಬಿಜೆಪಿ ಟೀಕಿಸಿದೆ.

- Advertisement - 

ಬಹಳಷ್ಟು ಗಣತಿದಾರರ ಬಳಿ ಉತ್ತಮ ಗುಣಮಟ್ಟದ ಮೊಬೈಲ್‌ಗಳು ಇಲ್ಲದ ಕಾರಣ ಜಾತಿಗಣತಿ ಆ್ಯಪ್ ಡೌನ್‌ಲೋಡ್ ಮಾಡಿ ಸಮೀಕ್ಷೆ ನಡೆಸಲು ಸಮಸ್ಯೆಯಾಗುತ್ತಿದೆ. ಸರ್ವರ್ ಸಮಸ್ಯೆ ಸಹ ಎದುರಿಸುತ್ತಿದ್ದಾರೆ.

- Advertisement - 

ಕೆಲವೆಡೆ ಗೊತ್ತಿದ್ದೂ ತಪ್ಪು ಮಾಹಿತಿ ದಾಖಲೆ ಸೇರುತ್ತಿದೆ. ಪರಿಶಿಷ್ಟ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ, ಜಾತಿಗಣತಿಯಲ್ಲಿನ ಪ್ರಶ್ನಾವಳಿಗಳಿಗೆ ಮಾಹಿತಿ ನೀಡಲು ಪರದಾಡುವಂತಾಗಿದೆ. ಹಾಗಾಗಿ ಪ್ರಶ್ನೆಗಳನ್ನು ಸರಳೀಕರಿಸುವ ಅಗತ್ಯವಿದೆ. ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕುರಿತಂತೆ ಗಮನಹರಿಸಬೇಕಿದೆ‌ ಎಂದು ಬಿಜೆಪಿ ತಾಕೀತು ಮಾಡಿದೆ.

 

- Advertisement - 

Share This Article
error: Content is protected !!
";