ಯೋಧರ ಕಲ್ಯಾಣಕ್ಕೆ ನಿಗಮ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯೋಧರ ಕಲ್ಯಾಣಕ್ಕೆ ನಿಗಮ! ಸ್ಥಾಪನೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಜೈ ಹಿಂದ್ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರ ಯೋಧರಿಗೆ ಕೃತಜ್ಞತೆ, ನಿವೃತ್ತ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

- Advertisement - 

ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ಈ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ. ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ ಕಾಂಗ್ರೆಸ್‌ ಶಕ್ತಿ ಈ ದೇಶದ ಶಕ್ತಿ ಎಂದು ಹೇಳುತ್ತಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.

ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಕರ್ನಾಟಕ ಸರ್ಕಾರ ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದು ಅವರು ತಿಳಿಸಿದರು.

- Advertisement - 

Share This Article
error: Content is protected !!
";