ಸ್ವಾಮೀಜಿ, ಶಾಸಕರು, ರೈತರ ವಿರುದ್ಧದ ಕೇಸ್‌ ದಾಖಲು ಬೇಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯಲ್ಲಿ ನಡೆದ ಹೇಮಾವತಿ ಲಿಂಕ್ ಕೆನಾಲ್ ಹೋರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹೋರಾಟಗಾರರು, ಜನಪ್ರತಿನಿಧಿಗಳು ಮತ್ತು ಹೋರಾಟದಲ್ಲಿ ಭಾಗಿಯಾಗಿದ್ದ ವಿವಿಧ ಮಠಗಳ ಸ್ವಾಮೀಜಿಗಳ ಮೇಲೆ ಕೇಸ್‌ ದಾಖಲಿಸಲು ಹೊರಟಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭಂಡತನಕ್ಕೆ ಸಾಕ್ಷಿ ಎಂದು ಬಿಜೆಪಿ ದೂರಿದೆ.

ಸರ್ಕಾರ ಕೂಡಲೇ ಸರ್ವ ಪಕ್ಷಗಳ ಸಭೆ ಕರೆದು ಜಿಲ್ಲೆಗಳ ಜನಪ್ರತಿನಿಧಿಗಳು, ಹೋರಾಟಗಾರರು ಹಾಗೂ ರೈತ ಮುಖಂಡರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಲಿಂಕ್ ಕೆನಾಲ್ ಕುರಿತು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಹಾಗೂ ಹೋರಾಟಗಾರರ ಮೇಲೆ‌ ಕೇಸ್ ದಾಖಲಿಸಲು ಹೊರಟಿರುವುದನ್ನು ಈ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ತಾಕೀತು ಮಾಡಿದೆ.

- Advertisement - 

 

- Advertisement - 
Share This Article
error: Content is protected !!
";