ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಭಾಷೆಯ ವಿಚಾರದಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ಜೆಡಿಎಸ್ ತಿಳಿಸಿದೆ. ಮೊದಲು ಕನ್ನಡಿಗರ ಕ್ಷಮೆಯಾಚಿಸಿ ಎಂದು ತಾಕೀತು ಮಾಡಿದ ನ್ಯಾಯಾಧೀಶರು.

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ʼನಲ್ಲಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರುಕಮಲ್ ಹಾಸನ್ ಕ್ಷಮೆ ಕೇಳಿದರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ ? ಅವರೇನು ಇತಿಹಾಸಕಾರರಾ ?

- Advertisement - 

ಈ ಹಿಂದೆ ತಮಿಳುನಾಡಿನ ರಾಜಗೋಪಾಲಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಮೊದಲು ಕ್ಷಮೆ ಕೇಳಲಿ ಎಂದು ಕರ್ನಾಟಕ ಹೈಕೋರ್ಟ್‌ ತಾಕೀತು ಮಾಡಿದೆ ಎಂದು ಜೆಡಿಎಸ್ ತಿಳಿಸಿದೆ.

 

- Advertisement - 

 

Share This Article
error: Content is protected !!
";