ಸರ್ಕಾರದ ಅಚಾತುರ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋತಿ ಮೊಸರು ತಿಂದು ಮೇಕೆ ಬಾಯಿಗೆ ವರೆಸಿತು” ಇಂತಹ ಘನ ಕಾರ್ಯವನ್ನು  ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಜೆಡಿಎಸ್ ಟೀಕಿಸಿದೆ.

ಫೋಟೋ ಸೆಷನ್ ನಡೆಸಿ ಸಂಭ್ರಮಿಸಿದ್ದು ಸಿಎಂ‌, ಸಿಎಂ ಮೊಮ್ಮಕ್ಕಳು, ಡಿಸಿಎಂ, ಸಚಿವರು, ಅವರ ಮಕ್ಕಳು, ಆಡಳಿತ ಪಕ್ಷದ ಶಾಸಕರು, ಅವರ ಕುಟುಂಬದವರು ಹಾಗೂ ಅಧಿಕಾರಿಗಳು.

- Advertisement - 

 ಆದರೆ, ಶಿಕ್ಷೆ ಮಾತ್ರ ಬೆಂಗಳೂರು ಪೊಲೀಸ್ ಕಮಿಷನರ್ಗೆ. ಸರ್ಕಾರ ಮಾಡಿರುವ ಅಚಾತುರ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ ! ಇದು ಯಾವ ನ್ಯಾಯ?

ದುರಂತಕ್ಕೆ ಪ್ರಮುಖ ಕಾರಣರಾದ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ ಅವರನ್ನು ಸಂಪುಟದಿಂದ ಹೊರಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ನಿಮ್ಮ ನೈತಿಕತೆಯನ್ನು ಉಳಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮಂತಹ ಕಟುಕರು , ಪಾಪ ಪ್ರಜ್ಞೆ ಇಲ್ಲದವರು ರಾಜಕಾರಣಕ್ಕೆ ಕಪ್ಪು ಚುಕ್ಕೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

- Advertisement - 

 

Share This Article
error: Content is protected !!
";