ಇಬ್ಬರು ಒಂದೇ ಹುಡುಗಿ ಪ್ರೀತಿಸುತ್ತಿದ್ದು ಓರ್ವ ಮಟಾಷ್

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ(ಬೆಂ.ಗ್ರಾಮಾಂತರ):
ತಡ ರಾತ್ರಿ ಯುವಕನನ್ನು ಪಾರ್ಟಿಗೆಂದು ಕರೆದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಬಳಿ ತಡರಾತ್ರಿ 1:30ರ ಸಮಯದಲ್ಲಿ ಸಂಭವಿಸಿದೆ.

- Advertisement - 

ಈ ಘಟನೆಯಲ್ಲಿ ದರ್ಶನ್(24) ಭೀಕರವಾಗಿ ಹತ್ಯೆ ಆಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

- Advertisement - 

ಕೊಲೆ ಆರೋಪಿ ವೇಣುಗೋಪಾಲ್ ಘಟನೆ ನಂತರ ನಾಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ದರ್ಶನ್​ನನ್ನು ವೇಣು ಗೋಪಾಲ್ ಪಾರ್ಟಿಗೆ ಕರೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಮೃತ ದೇಹ ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದೆ. ಕೊಲೆ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement - 

 

 

Share This Article
error: Content is protected !!
";