ಜುಲೈ-1ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಕೆ.ವಿ ಪ್ರಭಾಕರ್ ತಿಳಿಸಿದರು.

ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.

- Advertisement - 

ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾಕರ್ ಭರವಸೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

 

- Advertisement - 

 

Share This Article
error: Content is protected !!
";