ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಟಿಹೆಚ್ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕೂ ಮೀರಿದ ಆಸ್ತಿ, ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಟಿಹೆಚ್ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಎಸ್.ಪಿ ವಾಸುದೇವರಾಮ್, ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಕ್ಲಿನಿಕ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಆದಿವಾಲ ಗ್ರಾಮದಲ್ಲಿ ಎಸ್ಎಲ್ ವಿ ಕ್ಲಿನಿಕ್ ಕೂಡಾ ಟಿಹೆಚ್ಒ ವೆಂಕಟೇಶ್ ತೆರೆದಿದ್ದು ಕ್ಲಿನಿಕ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಸೀಲನೆ ಮಾಡಿದ್ದಾರೆ.

