ಹಣಕ್ಕಾಗಿ ಬಾಲಕನನ್ನ ಅಪಹರಣ ಮಾಡಿ, ಕತ್ತು ಕೊಯ್ದು ಪೆಟ್ರೋಲ್ ಹಾಕಿ ಸುಟ್ಟ ದುಷ್ಕರ್ಮಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಘಟನೆ ಬೇಕಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ 13 ವರ್ಷದ ಬಾಲಕನನ್ನ ಅಪಹರಣ ಮಾಡಿ, ಹಣಕ್ಕೆ ಬೇಡಿಕೆ ಇಟ್ಟು, ಕಡೆಗೆ ಬಾಲಕನ ಕತ್ತು ಕೊಯ್ದು ಕೊಲೆ ಮಾಡಿ ಮೃತದೇಹವನ್ನ ಪೆಟ್ರೋಲ್ ಹಾಕಿ ಸುಟ್ಟಿರುವ ದಾರುಣ ಘಟನೆ ಎಂತಹವರನ್ನೂ ಬೆಚ್ಚಿ ಬೀಳಿಸುತ್ತದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement - 

ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ, ನಿಮ್ಮ ಇಲಾಖೆ ಎಚ್ಚೆತ್ತಿಕೊಳ್ಳಲು ಇನ್ನೂ ಎಷ್ಟು ಜನರ ಬಲಿಯಾಗಬೇಕು? ಇನ್ನು ಎಂತೆಂತಹ ದುರ್ಘಟನೆಗಳು ನಡೆಯಬೇಕು? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

 

- Advertisement - 

Share This Article
error: Content is protected !!
";