ನವೋದಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರಶಕ್ತ ಸಾಲಿಗೆ 6ನೇ ತರಗತಿಯ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಇದೇ ಆಗಸ್ಟ್ 27 ಕೊನೆಯ ದಿನವಾಗಿದೆ.

ಆವಾಹರ್ ನವೋದಯ ವಿದ್ಯಾಲಯದ ಆಡಳಿತಾತ್ಮಕ ಕಾರಣಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 27ರ ಅವಧಿವರೆಗೆ ವಿಸ್ತರಿಸಿದ್ದು,

- Advertisement - 

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ https://cbseitms.rcil.gov.in./nvs/index/registration  ನಲ್ಲಿ ಸಲ್ಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.

- Advertisement - 

Share This Article
error: Content is protected !!
";