ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಹಾಗೂ ಉತ್ಥಾನ ಟ್ರಸ್ಟ್ ವತಿಯಿಂದ ಆ.೨೩ ರಂದು ಬೆಳಿಗ್ಗೆ ೧೦-೪೦ ಕ್ಕೆ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಗೌರವಾಧ್ಯಕ್ಷರು ಹಾಗೂ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರುಗಳಾದ ಪಿ.ರಮೇಶ್, ಟಿ.ಹೆಚ್.ಬಸವರಾಜಪ್ಪ, ನಿವೃತ್ತ ಪ್ರಾಚಾರ್ಯರಾದ ಬಿ.ಸಿ.ಕಾಂತರಾಜ್ ಇವರುಗಳು ಆಗಮಿಸಲಿದ್ದಾರೆ.
ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡುವರು.
ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಪ್ರಕಟಣೆಯಲ್ಲಿ ಕೋರಿದೆ.

