ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಣ್ಣುಮಕ್ಕಳಿಗೆಲ್ಲಿದೆ ಸುರಕ್ಷತೆಯ ಗ್ಯಾರೆಂಟಿ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಕಳೆದ 2.5 ವರ್ಷಗಳಲ್ಲಿ ರಾಜ್ಯದಲ್ಲಿ ಮಹಿಳೆಯರು, ಹೆಣ್ಣುಮಕ್ಕಳ ಮೇಲೆ 1,888 ಲೈಂಗಿಕ ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ.
ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟ ತಪ್ಪಿಗೆ ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಪದೇ ಪದೇ ನಡೆಯುತ್ತಿರುವ ಅಮಾನವೀಯ ಘಟನೆಗಳು ಕನ್ನಡಿಗರನ್ನು ತಲೆ ತಗ್ಗಿಸುವಂತೆ ಮಾಡಿದೆ. ಕೂಡಲೇ ಸಿದ್ದರಾಮಯ್ಯ ಅವರು ಹಾಗೂ ಡಾ.ಜಿ. ಪರಮೇಶ್ವರ ಅವರು ಅತ್ಯಾಚಾರಿಗಳನ್ನು ಹತ್ತಿಕ್ಕದೆ ಹೋದರೆ, ಮಹಿಳೆಯರು, ಹೆಣ್ಣುಮಕ್ಕಳ ಶಾಪ ಈ ಸರ್ಕಾರಕ್ಕೆ ತಟ್ಟುವುದು ಶತಸಿದ್ಧ ಎಂದು ಅಶೋಕ್ ಎಚ್ಚರಿಸಿದ್ದಾರೆ.

