ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ. 60ರಷ್ಟು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದಅಧ್ಯಕ್ಷ ರವಿಕುಮಾರ್ 5 ಲಕ್ಷ ಕಮಿಷನ್ ಪಡೆಯುತ್ತಿದ್ದಾನೆ.
ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕುಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ SCSP/ TSP ನಿಧಿಯಲ್ಲಿನ ಸಾವಿರಾರು ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

