i
ಉಪ್ಪಾರ ಸಮಾಜದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ರಘುಮೂರ್ತಿ.
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಾಡಿನ ಇತಿಹಾಸದಲ್ಲಿ ಜನರ ನೀರಿನ ಸಮಸ್ಯೆಯನ್ನು ನಿವಾರಿಸಲು ಪಾತಾಳದಲ್ಲಿ ಅಡಗಿದ್ದ ಗಂಗೆಯನ್ನು ತನ್ನ ಭಕ್ತಿಯಿಂದ ಮೇಲೆತ್ತಿದ ಮಹಾನ್ ಪುರುಷ ಭಗೀರಥ ಮಹರ್ಷಿಗಳ ಜಯಂತಿ ಆಚರಣೆ ಸಂತಸ ತಂದಿದೆ. ಭಗೀರಥರ ಈ ಪುಣ್ಯ ಕಾರ್ಯ ಇಂದಿಗೂ ಜನರಲ್ಲಿ ಶಾಶ್ವತವಾಗಿ ನೆಲೆಯೂರಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಉಪ್ಪಾರ ಸಮಾಜದ ಹಾಗೂ ಭಗೀರಥ ಯುವಕ ಸಂಘ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಪ್ಪಾರ ಸಮಾಜದ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಲ್ಲಿ ಮನವಿ ಮಾಡಲಾಯಿತು. ಮುಂದಿನ ದಿನಗಳಲ್ಲಿ ಈ ಕುರಿತು ಉತ್ತಮ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ಶಾಸಕರು ನೀಡಿದರು.
ಉಪ್ಪಾರ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಹನುಮಂತಪ್ಪ, ಯುವಕ ಸಂಘದ ಅಧ್ಯಕ್ಷ ಡಿಎಂಕೆ ರವಿ, ನಿವೃತ್ತ ಪ್ರಾಂಶುಪಾಲ ಟಿ.ನಾಗರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ, ಸದಸ್ಯರಾದ ನಾಗರಾಜು, ಉಮೇಶ್, ಹರೀಶ್, ರವಿಕುಮಾರ್, ಮುಖಂಡರಾದ ತಿಮ್ಮರಾಯಪ್ಪ, ರಾಯಣ್ಣ, ಲಕ್ಷ್ಮಣ, ರಂಗಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಭಗೀರಥ ಜಯಂತಿ ನಿಮಿತ್ತ ಗ್ರಾಮದ ರಸ್ತೆಗಳಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರ ಮೆವರಣಿಗೆ ನಡೆಸಲಾಯಿತು.