ಅಹಿಂಸೆ, ಸತ್ಯದ ಹಾದಿಯಲ್ಲಿ ಸ್ವಾತಂತ್ರ್ಯ ಕೊಡಿಸಿದ ಮಹಾನ್ ನಾಯಕ ಗಾಂಧಿ- ಆಂಜನೇಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಂದೂಕು
, ಗುಂಡು ಇಲ್ಲದೆ ಅಹಿಂಸೆ, ಸತ್ಯದ ಹಾದಿಯಲ್ಲಿ ಬ್ರಿಟೀಷರ ಕಪಿಮುಷ್ಠಿಯಿಂದ ಭಾರತವನ್ನು ಮುಕ್ತಿಗೊಳಿಸಿದ ಮಹಾನ್ ನಾಯಕ ಮಹಾತ್ಮಗಾಂಧೀಜಿ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ತಾಲ್ಲೂಕಿನ ಸೀಬಾರದಲ್ಲಿ ಗುರುವಾರ ಆಯೋಜಿಸಿದ್ದ ಗಾಂಧೀಜಿ, ಶಾಸ್ತ್ರೀಜಿ ಜಯಂತ್ಯುತ್ಸವದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿ, ಬಹುದೊಡ್ಡ ರಾಷ್ಟ್ರ ಭಾರತ ಆಂಗ್ಲರ ಸಂಕೋಲೆಗೆ ಸಿಲುಕಿ ನರಳುತ್ತಿದ್ದ ಸಂದರ್ಭ ಸ್ವಾತಂತ್ರ್ಯ ಚಳವಳಿಯ ನೇತೃತ್ವ ವಹಿಸಿಕೊಂಡು ರಕ್ತರಹಿತ ಕ್ರಾಂತಿಗೆ ಮುನ್ನುಡಿ ಬರೆದು ಯಶಸ್ಸು ಕಂಡ ಗಾಂಧೀಜಿ ನಡೆ ವಿಶ್ವಕ್ಕೆ ಮಾದರಿ ಆಗಿದೆ ಎಂದು ತಿಳಿಸಿದರು.

- Advertisement - 

ಅನೇಕ ದಶಕಗಳ ಕಾಲ ಭಾರತವನ್ನು ಲೂಟಿ ಮಾಡುತ್ತಿದ್ದ, ಲಾಠಿ, ಬಂದೂಕುಗಳ ಮೂಲಕ ಜನರನ್ನು ಬೆದರಿಸುತ್ತಿದ್ದ, ದೇಶದಲ್ಲಿ ರಾಜರನ್ನು ಹೊಡೆದಾಳುವ ಮೂಲಕ ಆಳ್ವಿಕೆ ನಡೆಸುತ್ತಿದ್ದ ಆಂಗ್ಲರನ್ನು ಕೇವಲ ಶಾಂತಿ ಮಂತ್ರದಲ್ಲಿಯೇ ದೇಶಕ್ಕೆ ಸ್ವತಂತ್ರö್ಯ ತಂದುಕೊಟ್ಟ ಗಾಂಧೀಜಿ ವಿಶ್ವಕ್ಕೆ ಮಾದರಿ ಎಂದರು.

ಕೇವಲ ದೇಶಕ್ಕೆ ಸ್ವತಂತ್ರ ತಂದುಕೊಡುವುದಷ್ಟಕ್ಕೆ ಸೀಮಿತವಾಗಿಲ್ಲದೆ ಪಾನಮುಕ್ತ ದೇಶ ನಿರ್ಮಾಣದ ಕನಸು ಕಂಡಿದ್ದರು. ಭಾರತದಲ್ಲಿ ತಾಂಡವವಾಡುತ್ತಿದ್ದ ಅಸ್ಪೃಶ್ಯತೆ ವಿರುದ್ಧ ಅಭಿಯಾನ, ಪಾದಯಾತ್ರೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ನೊಂದ ಜನರು ಮುಖ್ಯವಾಹಿನಿಗೆ ಬರುವ ರೀತಿ ಕಾರ್ಯನಿರ್ವಹಿಸಿದರು ಎಂದು ಆಂಜನೇಯ ಹೇಳಿದರು.

- Advertisement - 

ಪರಿಶಿಷ್ಟರ ಕಾಲನಿಗಳಿಗೆ ತೆರಳಿ ಶೌಚಗೃಹ, ಚರಂಡಿ, ಬೀದಿಬದಿ ಸ್ವಚ್ಛತೆಗೊಳಿಸುವ ಕಾರ್ಯ ಸ್ವತಃ ನಡೆಸಿದ ಗಾಂಧೀಜಿ, ಎಲ್ಲರೂ ಮಾನವರೇ ಎಂಬ ಸಂದೇಶ ರವಾನಿಸಿದರು.

ಜಾತಿಯಿಂದ ಯಾರೊಬ್ಬರೂ ಅವಮಾನಿತರಾಗಬಾರದೆಂದು ಅಸ್ಪೃಶ್ಯ ನೋವುಂಡುತ್ತಿದ್ದ ಜನರನ್ನು ಹರಿಜನರೆಂದು ಕರೆದು ಜನರ ಮನಸ್ಸಿನಿಂದ ಅಸ್ಪೃಶ್ಯತೆ ದೂರಗೊಳಿಸಲು ಮುಂದಾದ ಕಾರ್ಯ ಸ್ಮರಣೀಯ ಎಂದು ತಿಳಿಸಿದರು.

ದಲಿತರ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕೆಂಬ ಆಶಯದೊಂದಿಗೆ ತಾವು ಕಾಲಿಟ್ಟ ಕಡೆಗಳಲ್ಲಿ ಹರಿಜನ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಿದ್ದು ದಲಿತರಲ್ಲಿ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿತು ಎಂದರು.

ಎಸ್ಸಿ ಘಟಕದ ತಾಲ್ಲೂಕಾಧ್ಯಕ್ಷ ಅನಿಲ್ ಕೋಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಬೋರೇನಹಳ್ಳಿ, ಶಾಮಿಯಾನ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ, ಮುಖಂಡರಾದ ಮಣಿ, ಪಾಂಡುರಂಗಪ್ಪ ಚಿಕ್ಕಾಲಘಟ್ಟ, ಇಂಗಳದಾಳ್ ರಘು ಇತರರಿದ್ದರು.

 

Share This Article
error: Content is protected !!
";