ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಯುವತಿ ಒಬ್ಬಳು ನಾಪತ್ತೆ ಯಾಗಿದ್ದು ಯುವಕನ ಸಂಬಂಧಿಗೆ ಯುವತಿ ಕಡೆಯವರು ಪೊಲೀಸರು ಠಾಣೆ ಬಳಿಯೇ ಚಾಕು ಇರಿದ ಭೀಕರ ಘಟನೆ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಜಾಕೀರ್ ಹಾಗೂ ಆತನ ಸ್ನೇಹಿತನಿಂದ ಆರ್ಮುಗಮ್ಗೆ ಚಾಕು ಇರಿದು ಹಲ್ಲೆ ಮಾಡಲಾಗಿದೆ. ಈ ಕುರಿತು ಗುಂಡ್ಲುಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಬಿ ಆಯೇಷಾ ಕಳೆದ ಅಕ್ಟೋಬರ್- 1 ರಿಂದ ಕಣ್ಮರೆಯಾಗಿದ್ದು ಇದಕ್ಕೆ ಮಹೇಂದ್ರನೇ ಕಾರಣವೆಂದು ಯುವತಿಯ ಸಂಬಂಧಿಕರು ಶಂಕಿಸಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಪೌರಕಾರ್ಮಿಕರ ಕಾಲೋನಿ ನಿವಾಸಿ ಮಹೇಂದ್ರನ ಸಂಬಂಧಿ ಆರ್ಮುಗಮ್ ಮಹೇಂದ್ರ ಕಾಣೆಯಾಗಿದ್ದಾನೆಂದು ದೂರು ಕೊಡಲು ಠಾಣೆಗೆ ಬಂದಿದ್ದರು.
ಜಾಕೀರ್ ಹಾಗೂ ಆತನ ಸ್ನೇಹಿತನಿಂದ ಈ ವೇಳೆ ಠಾಣೆ ಬಳಿಯೇ ಚಾಕುವಿನಿಂದ ಆರ್ಮುಗಮ್ ಕುತ್ತಿಗೆಗೆ ಇರಿದಿದ್ದಾರೆ. ಸದ್ಯ ನಾಪತ್ತೆ ಹಾಗೂ ಚಾಕು ಇರಿತ ಸಂಬಂಧ ಪ್ರಕರಣ ದಾಖಲಾಗಿದೆ.

