ಚಂದ್ರವಳ್ಳಿ ನ್ಯೂಸ್, ಹಾಸನ:
ಶಿಂಧೆ ಬಣದ ಶಿವಸೇನಾ ಸೇರ್ಪಡೆ ಆಗುವ ಕುರಿತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ, ಕೇವಲ ವದಂತಿಗಳು ಮಾತ್ರ ಎಂದು ಅವರು ತಿಳಿಸಿದ್ದಾರೆ.
ಹಿಂದೂ ಮತಗಳು ವಿಭಜನೆಯಾಗಬಾರದು ಎಂಬುದು ತಮ್ಮ ಮುಖ್ಯ ಗುರಿಯಾಗಿದ್ದು, ಹಿಂದೂಗಳ ಮತ ವಿಭಜಿಸುವಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಯತ್ನಾಳ್ ತಿಳಿಸಿದ್ದಾರೆ.

