ಪತ್ರಕರ್ತರ ಸಂಘ ಚುನಾವಣೆ
ಚಿತ್ರದುರ್ಗ ಜಿಲ್ಲಾಘಟಕ: 17 ನಾಮಪತ್ರ ಸಲ್ಲಿಕೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ 2025–28ನೇ ಅವಧಿಯ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 24ರಂದು ಶುಕ್ರವಾರ ಒಟ್ಟು 17 ನಾಮಪತ್ರ ಸಲ್ಲಿಕೆಯಾಗಿವೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ರಾಜ್ಯ ಕಾರ್ಯಕಾರಿ ಸ್ಥಾನಕ್ಕೆ ಬಿ.ದಿನೇಶ್ ಗೌಡಗೆರೆ ಹಾಗೂ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಿ.ಎಸ್.ವಿನಾಯಕ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವೀರೇಶ್ ವಿ, ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎನ್.ಅಹೋಬಲಪತಿ, ಡಿ.ಕುಮಾರಸ್ವಾಮಿ ಹಾಗೂ ಕೆ.ಕೆಂಚಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ರವಿ ಮಲ್ಲಾಪುರ, ಸಿ.ಎನ್.ಕುಮಾರ್, ಎಸ್.ಬಿ.ರವಿಕುಮಾರ್, ಟಿ.ಜೆ.ತಿಪ್ಪೇಸ್ವಾಮಿ, ಜಿಓಎನ್ ಮೂರ್ತಿ, ಹೆಚ್.ಸಿ.ಗಿರೀಶ್, ಎಸ್.ಮಹಂತೇಶ್, ಹೆಚ್.ಟಿ.ನವೀನ್ ಕುಮಾರ್, ಹೆಚ್.ಟಿ.ಪ್ರಸನ್ನ, ಚೌಳೂರು ಮಂಜುನಾಥ್ ಹಾಗೂ ಟಿ.ದರ್ಶನ್ ನಾಮಪತ್ರ ಸಲ್ಲಿಸಿದ್ದಾರೆ.
ಅಕ್ಟೋಬರ್ 27ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಕಚೇರಿ ಅವಧಿಯಲ್ಲಿ ಬಂದು ನಾಮಪತ್ರ ಸಲ್ಲಿಸಬಹುದು.
ಅ. 28ರಂದು ನಾಮಪತ್ರಗಳ ಪರಿಶೀಲನೆ, ಅ. 30ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಅಗತ್ಯಬಿದ್ದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ಮತದಾನ ನಡೆಯಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

