ಬಿಹಾರ್ ಅಭಿವೃದ್ಧಿಪಡಿಸುವಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ ವಿಫಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್‌ನಲ್ಲಿ
ಕರ್ನಾಟಕ ಬಿಹಾರ್ ಸಮಾಜಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ, ಬಿಹಾರ ಮೂಲದ ಬೆಂಗಳೂರು ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಎರಡು ದಶಕಗಳಿಂದ ಆಡಳಿತದಲ್ಲಿದ್ದರೂ ಬಿಹಾರ್ ರಾಜ್ಯವನ್ನು ಅಭಿವೃದ್ಧಿಪಡಿಸುವುದರಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಮೈತ್ರಿಕೂಟ ವಿಫಲವಾಗಿದೆ ಎಂದು ಶಿವಕುಮಾರ್ ಆರೋಪಿಸಿದರು.

- Advertisement - 

ಈ ಬಾರಿಯ ಬಿಹಾರ್ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಒಗ್ಗಟ್ಟಾಗಿ ಚುನಾವಣಾ ಕಣಕ್ಕಿಳಿದಿದೆ. ಈ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಲು ಎಲ್ಲರೂ ಬೆಂಬಲಿಸಿ, ಸಹಕರಿಸಬೇಕು.

- Advertisement - 

ಅಲ್ಲದೆ, ನವೆಂಬರ್-6 ಮತ್ತು 11 ರಂದು ನಡೆಯಲಿರುವ ಬಿಹಾರ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ನೆಲೆಸಿರುವ ಬಿಹಾರ್ ನಿವಾಸಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಕಂಪನಿಗಳು ಮೂರು ದಿನಗಳ ರಜೆ ನೀಡಬೇಕೆಂದು ಡಿಸಿಎಂ ಶಿವಕುಮಾರ್ ಮನವಿ ಮಾಡಿದರು.

 

 

 

Share This Article
error: Content is protected !!
";