ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಕೊನಘಟ್ಟ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ದುಶ್ಚಟ ಮುಕ್ತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿ ಗೋವಿಂದರಾಜು ಮಾತನಾಡಿ ವಿದ್ಯಾರ್ಥಿ ಪ್ರೌಢಶಿಕ್ಷಣ ಯಶಸ್ಸಿನ ಮೆಟ್ಟಿಲು ಅದನ್ನು ಹಾಳುಮಾಡಿಕೊಳ್ಳದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ನಶೆಯ ನರಕಕ್ಕೆ ಬಿದ್ದರೆ ಏಳುವುದು ಕಷ್ಟ ಎಂದು ಎಚ್ಚರಿಸಿದರು.
ಉತ್ತಮ ಸ್ನೇಹಿತರ ಸಹವಾಸದಿಂದ ಉತ್ತಮ ಜೀವನ ಕಟ್ಟಿಕೊಳ್ಳಬೇಕು ದುಶ್ಚಟಗಳಿಂದ ದೂರವಿರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕ ರಘು, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಾಂದಿನಿ, ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

