ಹಿರಿಯ ಪತ್ರಕರ್ತ ನಾಡಿಗ್ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡಿದ‌ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಯುಕ್ತ ಕರ್ನಾಟಕ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ 93 ವಸಂತ ತುಂಬಿದ ಹಿರಿಯ ಪತ್ರಕರ್ತರಾದ ಸತ್ಯನಾರಾಯಣ ನಾಡಿಗ್ ಅವರ ಆಸ್ಪತ್ರೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 94 ಸಾವಿರ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.

ಸತ್ಯನಾರಾಯಣ ನಾಡಿಗ್ ಅವರು ಕ್ಯಾನ್ಸರ್ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸರ್ಕಾರದ ಗಮನಕ್ಕೆ ತಂದಿದ್ದು ಚಿಕಿತ್ಸೆಗೆ ನೆರವು ಕೋರಿದ್ದರು.

- Advertisement - 

ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದಗಳನ್ನು ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸಲ್ಲಿಸಿದ್ದಾರೆ.

 

- Advertisement - 

 

Share This Article
error: Content is protected !!
";