ಮಹಿಳೆಯರು ಪ್ರಬುದ್ಧರಾದರೆ ಜಗತ್ತು ಪ್ರಬುದ್ಧ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಶನಿವಾರ ಎಬಿಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು

ಜಿಲ್ಲಾ ನಿರ್ದೇಶಕ ಉಮಾರಬ್ಬ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಪ್ರಬುದ್ಧರಾದರೆ ಜಗತ್ತು ಪ್ರಬುದ್ಧ ಆದಂತೆ ಎಂದು ಅವರು ತಿಳಿಸಿದರು.

- Advertisement - 

ಮಹಿಳೆಯರು ದೇಶಹೊರ ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರ ಬಗ್ಗೆ ಮಾಹಿತಿ ನೀಡಿದರು. 

ಡಾ.ಇಂದಿರಾ ಮಾತನಾಡಿ ಬ್ರೆಸ್ಟ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಇತ್ತಿಚಿನ ಬೆಳವಣಿಗೆಯಲ್ಲಿ ಮಹಿಳೆಯರಲ್ಲಿ ಅತಿ ಹೆಚ್ಚಾಗಿ ಬ್ರೆಸ್ಟ್ ಕ್ಯಾನ್ಸರ್ ಕಂಡುಬರುತ್ತದೆ ಕಲುಷಿತ ವಾತಾವರಣ ಆಹಾರದ ಕಲಬೆರಿಕೆ ಮುಂತಾದ ಕಾರಣಗಳಿಂದ ಕ್ಯಾನ್ಸರ್ ಕಂಡುಬರುತ್ತಿದೆ ಪ್ರಥಮದಿಂದ ಚಿಕಿತ್ಸೆ ಪಡೆದರೆ ಗುಣಮುಖ ಆಗಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು. 

- Advertisement - 

ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಹುಲಿಕಲ್ ನಟರಾಜ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷರದ ನಾಗೇಶ್,

ತಾಲೂಕು ಯೋಜನಾಧಿಕಾರಿಗಳಾದ ದಿನೇಶ್ ಉಪಸ್ಥಿತರಿದ್ದರು. ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.

 

 

Share This Article
error: Content is protected !!
";